Karnataka Royal Dynasties
1) ಮೌರ್ಯರು
ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.
ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.
ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.
ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :
ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ.ರಾಮೇಶ್ವರ.
ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ.
ಗುಲ್ಬರ್ಗಾ ಜಿಲ್ಲೆಯ ಸನ್ನತಿ.
ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದೇಗೊಳ್ಳಂ
2) ಶಾತವಾಹನರು (ಕ್ರಿ.ಪೂ. 238 – ಕ್ರಿ.ಶ 225)
ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.
ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.
ಇವರ ಲಾಂಛನ : ವರುಣ.
ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
ಶಾತವಾಹನರ ಮೂಲ ಪುರುಷ : ಸಿಮುಖ.
ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ
ಶಾತವಾಹನರನ್ನು ‘ ಶಾತಕರ್ಣಿಗಳೆಂದು’ ಕರೆಯುತ್ತಾರೆ.
3) ಬನವಾಸಿಯ ಕದಂಬರು (ಕ್ರಿ.ಶ 345 – 540)
ಈ ಸಂತತಿಯ ಸ್ಥಾಪಕ :ಮಯೂರವರ್ಮ (ಮಯೂರಶರ್ಮ) (345-360)
ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)
ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
ಇವರ ಲಾಂಛನ : ಸಿಂಹ.
ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬ ರೆಂದು ಮೂರು ಶಾಖೆಗಳಿದ್ದವು.
ಕದಂಬರ ಮೂಲದ ಬಗ್ಗೆ ‘ಶಾಂತಿವರ್ಮನ ತಾಳಗುಂದ ಶಾಸನ’ ತಿಳಿಸುತ್ತದೆ.
ಕನ್ನಡದ ಪ್ರಪ್ರಥಮ ಶಾಸನ – ಕಾಕುತ್ಸವರ್ಮನ ಹಲ್ಮಿಡಿ ಶಾಸನ.
4) ತಲಕಾಡಿನ ಗಂಗರು (ಕ್ರಿ.ಶ 350- 999)
ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
ಈ ಸಂತತಿಯ ಮೊದಲ ದೊರೆ : ದಡಿಗ (350 -400)
ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ
ಇವರ ಎರಡನೆಯ ರಾಜಧಾನಿ : ತಲಕಾಡು
ತಲಕಾಡಿನ ಮತ್ತೊಂದು ಹೆಸರು : ತಲವನಪುರ.
ಇವರ ಮೂರನೇ ರಾಜಧಾನಿ : ಚೆನ್ನಪಟ್ಟಣ ಬಳಿಯ ಮಾಕುಂದ
ಇವರ ಲಾಂಛನ : ಆನೆ(ಮದಗಜ)
ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ದುರ್ವಿನೀತ (540-600)
ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.
ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.
5) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757)
ಈ ಸಂತತಿಯ ಸ್ಥಾಪಕ : ಜಯಸಿಂಹ
ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ಇಮ್ಮಡಿ ಪುಲಕೇಶಿ (609-642)
ಇವರ ರಾಜ ಲಾಂಛನ : ವರಹ.
ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.
ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು ‘ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು ‘ ಎನ್ನುವರು.
6) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 – 540)
ಈ ಸಂತತಿಯ ಸ್ಥಾಪಕ : ದಂತಿದುರ್ಗ
ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
ಇವರ ಲಾಂಛನ : ಗರುಡ
ಈ ಸಂತತಿಯ ಅತ್ಯಂತ ಹೆಸರಾಂತ ದೊರೆ :ಅಮೋಘವರ್ಷ ನೃಪತುಂಗ (814-878)
ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.
7) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200)
ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
ಇವರ ರಾಜಧಾನಿ : ಕಲ್ಯಾಣ
ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)
1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು.
8) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 – 1183)
ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.
9) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 – 1346)
ಈ ಸಂತತಿಯ ಮೂಲ ಪುರುಷ : ಸಳ.
ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.
ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152)
ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.
10) ವಿಜಯನಗರ ಸಾಮ್ರಾಜ್ಯ (ಕ್ರಿ.ಶ 1336 – 1565)
ವಿದ್ಯಾರಣ್ಯರ ಸಹಾಯದಿಂದ ಹಕ್ಕ -ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
ಇವರ ರಾಜಧಾನಿ : ಹಂಪಿ
ತುಳುವ ಸಂತತಿಯ ಕೃಷ್ಣದೇವರಾಯ (1519 – 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.
1565 ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.
11) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 – 1527)
ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.

